ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಂಘದಲ್ಲಿ ಖಾಲಿ ಇರುವ ಗುಮಾಸ್ತ & ಜವಾನ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Vividoddesha Prathamika Gramina Krushi Sangha Recruitment 2026

ನಮಸ್ತೆ ಸ್ನೇಹಿತರೇ, ಸ್ಪರ್ಧಾದೀಪ ವೆಬ್ಸೈಟ್ ನಿಂದ ಇಂದು ನೂತನ ಉದ್ಯೋಗ ಮಾಹಿತಿಯನ್ನು ನೀಡುತ್ತೇವೆ. ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ನಿಯಮಿತ, ವಿಜಯನಗರ ವತಿಯಿಂದ ಖಾಲಿ ಇರುವ ಗುಮಾಸ್ತ (Clerk)ಮತ್ತು ಜವಾನ (Peon) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿರವ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ನಿಯಮಿತದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಖಾಲಿ ಇರುವ ಕ್ಲರ್ಕ್ & ಪಿಯೋನ್ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ದಿನಾಂಕ 27-01-2026 ರ ಒಳಗಾಗಿ ಅರ್ಜಿಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಎಲ್ಲ ಮಾಹಿತಿಯನ್ನು ಇಲ್ಲಿ ನಿಖರವಾಗಿ ಹಂಚಿಕೊಳ್ಳಲಾಗಿದೆ. ತಾವು ಈ ಉದ್ಯೋಗ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ಹಾಗೂ ಇತರರಿಗೂ ಕೂಡ ಹಂಚಿಕೊಳ್ಳಿ. ಇದೇ ರೀತಿಯ ನಿರಂತರ ಉದ್ಯೋಗ, ಸರ್ಕಾರಿ ಮಾಹಿತಿಗಾಗಿ ನಮ್ಮ ಟೆಲಿಕ್ರಾಮ್ ಗ್ರೂಪ್ ಅನ್ನು ಸೇರಿಕೊಳ್ಳಿ.
Vivididdesha Prathamika Gramina Krushi Sahakara Sangha Niyamitha Vijayanagara ದಲ್ಲಿ ಅಧಿಸೂಚನೆ ಪ್ರಕಟವಾಗಿದ್ದು, ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ.
ನೇಮಕಾತಿಯ ಪಕ್ಷಿನೋಟ:
| ನೇಮಕಾತಿ ಕಛೇರಿ: ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ನಿಯಮಿತ |
| ಹುದ್ದೆಗಳ ಪದನಾಮ: ಗುಮಾಸ್ತ & ಪಿಯೋನ್ |
| ಹುದ್ದೆಗಳ ಸಂಖ್ಯೆ: 04 ಹುದ್ದೆಗಳು |
| ಕಾರ್ಯ ನಿರ್ವಹಿಸಬೇಕಾದ ವಿಳಾಸ: ವಿಜಯನಗರ |
ಹುದ್ದೆಗಳ ವಿವರ:
| ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
| ಗುಮಾಸ್ತ | 03 |
| ಜವಾನ | 01 |
| ಒಟ್ಟು ಹುದ್ದೆಗಳು | 04 |
ವೇತನ ಶ್ರೇಣಿ:
ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ನಿಯಮಿತ, ವಿಜಯನಗರದ ನಿಯಾಮಾವಳಿಗಳನ್ವಯ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ಮತ್ತು: ರೂ. 1000/-
ಪಜಾ/ ಪಪಂ ವರ್ಗದವರಿಗೆ/ ಹಿಂದೂಳಿದ ವರ್ಗದವರಿಗೆ: ರೂ. 500/-
ಅರ್ಜಿ ಶುಲ್ಕವನ್ನು ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ನಿಯಮಿತ, ವಿಜಯನಗರ ಅವರ ಹೆಸರಿಗೆ ಪಾವತಿಯಾಗುವಂತೆ ಡಿಮ್ಯಾಂಡ್ ಡ್ರಾಫ್ಟ್/ ಪೇ ಆರ್ಡರ್ ಪಡೆದು ಅರ್ಜಿಯೊಂದಿಗೆ ಕಳುಹಿಸವುದು.
ಶೈಕ್ಷಣಿಕ ವಿದ್ಯಾರ್ಹತೆ
ಗುಮಾಸ್ತ: ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ ಉತ್ತೀರ್ಣ ಹೊಂದಿರಬೇಕು. ಕಂಪ್ಯೂಟರ್ ಆಪರೇಟರ್ & ಆಪ್ಲೀಕೇಶನ್ ಜ್ಞಾನ ಹೊಂದಿರಬೇಕು.
ಜವಾನ: ಎಸ್.ಎಸ್ಎಲ್.ಸಿ ಯಲ್ಲಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.
ವಯೋಮಿತಿ:
ಅಭ್ಯರ್ಥಿಗಳು ದಿನಾಂಕಕ್ಕೆ ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಟ 35 ವರ್ಷಗಳನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
2ಎ,2ಬಿ,3ಎ & 3ಬಿ ವರ್ಗದವರಿಗೆ: 38 ವರ್ಷ
ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡವರಿಗೆ: 40 ವರ್ಷ
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
- ಭರ್ತಿ ಮಾಡಿರುವ ಅರ್ಜಿ ನಮೂನೆ
- ಶೈಕ್ಷಣಿಕ ಮೂಲ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು
- ಗಣಕಯಂತ್ರ ಕೋರ್ಸ್ ಪ್ರಮಾಣಪತ್ರ
- ಅರ್ಜಿ ಶುಲ್ಕ ಪಾವತಿಸಿದ ರಸೀಧಿ
- ಜಾತಿ & ಆದಾಯ ಪ್ರಮಾಣ ಪತ್ರ,
- ಕನ್ನಡ ಮಾದ್ಯಮ ಪ್ರಮಾಣಪತ್ರ,
- ಗ್ರಾಮೀಣ ಪ್ರಮಾಣಪತ್ರ, ಮಾಜಿಸೈನಿಕ ಹಾಗೂ ಇತರೆ ಪ್ರಮಾಣಪತ್ರಗಳು
- ಇತರೆ ಅಗತ್ಯವಿರುವ ದಾಖಲೆಗಳು
ಅರ್ಜಿ ಸಲ್ಲಿಸುವುದು ಹೇಗೆ?
- ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ನಿಯಮಿತ, ವಿಜಯನಗರದ ಕಛೇರಿಯಲ್ಲಿ ರೂ. 200 ಪಾವತಿಸಿ ಅರ್ಜಿ ನಮೂನೆಯನ್ನು ಪಡೆಯಬೇಕು.
- ಅರ್ಜಿ ನಮೂನೆಯ ಎಲ್ಲ ಭಾಗಗಳನ್ನು ಮೂಲ ದಾಖಲೆಗಳಲ್ಲಿ ಇರುವಂತೆ ಸರಿಯಾಗಿ ಭರ್ತಿ ಮಾಡಿ.
- ಅರ್ಜಿ ನಮೂನೆಯ ಅಗತ್ಯ ಸ್ಥಳದಲ್ಲಿ ಪಾಸ್ ಪೊರ್ಟ್ ಸೈಜಿನ ತಮ್ಮ ಇತ್ತೀಚಿನ ಭಾವಚಿತ್ರವನ್ನು ಅಂಟಿಸಿ.
- ಅರ್ಜಿ ನಮೂನೆ ಜೊತೆಗೆ ಅಗತ್ಯವಿರುವ ಎಲ್ಲ ದಾಖಲೆಗಳನ್ನು ಲಗತ್ತಿಸಿಕೊಳ್ಳಿ. ನಂತರ ಅದನ್ನು ಒಂದು ಲಕೋಟೆಯ ಒಳಗೆ ಹಾಕಿ ಸೀಲ್ ಮಾಡಿ. ಲಕೋಟೆಯ ಮೇಲೆ ______________ ಹುದ್ದೆಗೆ ಅರ್ಜಿ ಎಂದು ದಪ್ಪ ಅಕ್ಷರಗಳಲ್ಲಿ ಬರೆಯಿರಿ
- ಕೆಳಗೆ ನೀಡಲಾದ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗೆ ಅರ್ಜಿಯನ್ನು ಕಳುಹಿಸಿಕೊಡಿ.
- ತಮ್ಮ ಮುಂದಿನ ಅಗತ್ಯ ಕ್ರಮಗಳಿಗಾಗಿ ಒಂದು ಪ್ರತಿಯನ್ನು ತಮ್ಮ ಬಳಿ ಜೋಪಾನವಾಗಿ ಇಟ್ಟುಕೊಳ್ಳಿ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-01-2026
ಅಧಿಕೃತ ಲಿಂಕುಗಳು/ Official Links
| ನೋಟಿಫಿಕೇಶನ್ ಡೌನ್ಲೋಡ್ |
ಕೊನೆಯ ಮಾತು:
ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ನಿಯಮಿತ, ವಿಜಯನಗರ ವತಿಯಿಂದ ಖಾಲಿ ಇರುವ ಗುಮಾಸ್ತ (Clerk)ಮತ್ತು ಜವಾನ (Peon) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ಮೇಲಿನ ಮಾಹಿತಿಯನ್ನು ನೀಡುವ ಮೊದಲು ಅದರ ನೈಜ್ಯತೆಯನ್ನು ಅಧಿಕೃತ ಮೂಲಗಳಿಂದ ಖಾತ್ರಿ ಪಡಿಸಿಕೊಂಡಿರುತ್ತೇವೆ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಆಯಾ ಸಂಸ್ಥೆಗಳು ಅಥವಾ ಇಲಾಖೆಯ ಪ್ರಕಟಣೆಯಾಗಿರುತ್ತದೆಯೇ ಹೊರತು ನಮ್ಮ ವೆಬ್ಸೈಟ್ ಯಾವುದೇ ಜವಾಬ್ದಾರಿಯಾಗಿರುವುದಿಲ್ಲ.
